ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಸೋಮವಾರ ನಡೆಯಿತು.

ಸಮಾರಂಭದಲ್ಲಿ ಶಾಲಾ ಸಂಚಾಲ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ಜಗತ್ತಿಗೆ ಒಡೆಯನಾದ ಶ್ರೀ ಕೃಷ್ಣ ಪರಮಾತ್ಮನ ಗುರು ಸಾಂದೀಪನಿ ಹೆಸರಿನಲ್ಲಿ ಶಾಲಾಧ್ಯಕ್ಷರು ಶಾಲೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆ ಎಂದರೆ ಕೇವಲ ಕಲಿಯುವುದು ಮಾತ್ರವಲ್ಲ ಒಳ್ಳೆತನವನ್ನು ಅಳವಡಿಸಿಕೊಂಡು, ಸಂಸ್ಕಾರಯುತವಾಗಿ, ತಂದೆ ತಾಯಿಗೆ ಗೌರವ ಕೊಟ್ಟು, ಶಾಲೆಗೆ ಚ್ಯುತಿ ಬಾರದ ಹಾಗೆ ಬಾಳಿ ಎಂದರು ಹಾಗೂ ನೂತನ ಮುಖ್ಯ ಶಿಕ್ಷಕ ಪ್ರಸನ್ನ ಕೆ ಅವರಿಗೆ ಅಭಿನಂದಿಸುತ್ತಾ ಎಲ್ಲರನ್ನು ಸ್ವಾಗತಿಸಿದರು.

ನಂತರ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿ ಗಳಿಗೆ ಉಡುಗೊರೆಯನ್ನು ನೀಡಿ ಆಶೀರ್ವಾದಿಸಿ ಮಾತನಾಡಿದ ಶಾಲಾ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಿ ಬಾಳಿ. ಪ್ರತಿ ದಿನವನ್ನು ಸುದಿನವನ್ನಾಗಿ ಮಾಡಿ ಆಯಾಯ ತರಗತಿಯಲ್ಲಿ ಒಳ್ಳೆಯ ವಿದ್ಯೆಯನ್ನು ಪಡೆದು, ಹೊಸ ಶೈಕ್ಷಣಿಕ ವರ್ಷ ಎಲ್ಲರಿಗೂ ಶುಭವನ್ನು ತರಲಿ, ಉತ್ತಮ ಅಂಕಗಳನ್ನು ಪಡೆದು ಸುಸಂಸ್ಕೃತ ಮಕ್ಕಳಾಗಿ ಬಾಳಿ ಎಂದು ಆಶೀರ್ವದಿಸಿದರು.





















































 
 

ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಮುಖ್ಯೋಪಾಧ್ಯಾಯರಾದ ಪ್ರಸನ್ನ ಕೆ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿ ಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸೇರಿದ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿದರು. ನಂತರ ಆರತಿ ಬೆಳಗಿ ತಿಲಕವಿಡುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ರಾಜ್ಯಪಾಲರಿಂದ ಗೌರವಿಸಲ್ಪಟ್ಟ ಸೌಟ್ ಗೈಡ್ ವಿಭಾಗದ ರಾಜ್ಯಪುರಸ್ಕಾರ ಮತ್ತು golden arrow ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಸಂಸ್ಥೆಯ ಅಧ್ಯಕ್ಷರು ವಿತರಿಸಿದರು.

ಪ್ರಮೀಳಾ  ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಳಾದ ಕು.ಆರಾಧ್ಯ ಮತ್ತು ಕು.ವಿಶಾಖಾ ಪ್ರಾರ್ಥಿಸಿ, ವಾಣಿ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top