ಸರ್ಕಾರದ ನಡವಳಿಕೆಯಿಂದಲೇ ಕರಾವಳಿಯಲ್ಲಿ ಕಾನೂನು ಹಾಳು : ಬಿ.ವೈ. ವಿಜಯೇಂದ್ರ

ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಎಂದು ಆರೋಪ

ಬೆಂಗಳೂರು: ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.

ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

















































 
 

ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ವರ್ತನೆಯನ್ನು ತಾವು ಗಮನಿಸಿ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂದು ಜನಾಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಮತ್ತೊಂದು ಕಡೆ ಸರ್ಕಾರದ ಹುಳುಕು ಮುಚ್ಚಿ ಹಾಕಿಕೊಳ್ಳಲು ಇಂಥ ಘಟನೆಗಳು ನಡೆಯುತ್ತಿವೆ. ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುಹಾಸ್ ಹತ್ಯೆ ನಡೆದಾಗ ಗೃಹ ಸಚಿವರು ಸುಹಾಸ್ ಮನೆಗೆ ಹೋಗದಂತೆ ಕೆಲವು ದುಷ್ಟ ಶಕ್ತಿಗಳು ಅವರನ್ನು ತಡೆದಿದ್ದವು. ಸುಹಾಸ್ ಶೆಟ್ಟಿ ಹತ್ಯೆ ಆದಾಗ ಮಹಿಳೆಯರೂ ಅದರಲ್ಲಿ ಭಾಗಿಯಾಗಿದ್ದರು. ಇದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. 3-4 ಜನ ಮಹಿಳೆಯರು ರಸ್ತೆಯಲ್ಲಿ ನಿಂತು ಕೊಲೆಗಡುಕರು, ದೇಶದ್ರೋಹಿಗಳನ್ನು ಕಾರಿನಲ್ಲಿ ಕೂರಿಸಿ, ಪರಾರಿ ಆಗಲು ಸಹಕರಿಸಿದ್ದರು. ಅದರ ಕುರಿತು ಏನಾಗಿದೆ? ಅವರನ್ನು ಬಂಧಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಚುನಾಯಿತ ಸರ್ಕಾರ ಇದೆ. ಆದರೆ ಪೊಲೀಸರು ಕಾನೂನು- ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂಬ ನಂಬಿಕೆ ಬರುತ್ತಿಲ್ಲ. ಇದರ ನಡುವೆ ಸಂಘ ಪರಿವಾರದ ಹಿರಿಯರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಹಿಂದೂ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ ಕುತಂತ್ರ ನಡೆಯುತ್ತಿದೆ. ಮಧ್ಯರಾತ್ರಿ ಕಾರ್ಯಕರ್ತರ ಮನೆಯ ಬಾಗಿಲು ತಟ್ಟಿ, ಅವರನ್ನು ವಿಚಾರಿಸುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವಾ? ಎಲ್ಲಿದ್ದೇವೆ ನಾವು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top