ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದ ಉಗ್ರನ ನಿಗೂಢ ಸಾವು
ಇಸ್ಲಾಮಾಬಾದ್ : ಭಾರತದ ವಿರುದ್ಧ ಸದಾ ವಿಷ ಕಾರುತ್ತಿದ್ದ ಜೈಶ್ ಎ ಮೊಹಮ್ಮದ್ ಉvಗ್ರ ಸಂಘಟನೆಯ ಕಮಾಂಡರ್ ಒಬ್ಬ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜೈಶ್-ಎ-ಮೊಹಮ್ಮದ್ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿರುವ ಉಗ್ರ. ಈ ನಿಗೂಢ ಸಾವು ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ.
ಮೌಲಾನಾ ಅಬ್ದುಲ್ ಅಜೀಜ್ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಜೈಶ್ ಸಭೆಯಲ್ಲಿ ಭಾರತದ ವಿರುದ್ಧ ವಿಷ ಕಾರಿ, ಭಾರತಕ್ಕೂ ಯುಎಸ್ಎಸ್ಆರ್ ಗತಿಯಾಗಲಿದೆ ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದ.
ಜೈಶ್ ಮತ್ತು ಪಾಕಿಸ್ತಾನ ಸರ್ಕಾರ ಈ ಸಾವಿನ ಬಗ್ಗೆ ಮೌನ ವಹಿಸಿವೆ. ಜೈಶ್ ಜೊತೆ ಸಂಬಂಧ ಹೊಂದಿರುವ ಸಾಮಾಜಿಕ ಮಾಧ್ಯಮ ಖಾತೆಗಳು ಅವನ ಸಾವು ಮತ್ತು ಅಂತ್ಯಕ್ರಿಯೆಯನ್ನು ದೃಢಪಡಿಸಿವೆ. ಅಬ್ದುಲ್ ಅಜೀಜ್ ಜೈಶ್-ಎ-ಮೊಹಮ್ಮದ್ನ ಪಂಜಾಬ್ ಪ್ರಾಂತ್ಯದಲ್ಲಿ ಮತ್ತು ವಿಶೇಷವಾಗಿ ಬಹಾವಲ್ಪುರ್, ರಾವಲ್ಪಿಂಡಿಯಂತಹ ಪ್ರದೇಶಗಳಲ್ಲಿ ಭಾರತದ ವಿರುದ್ಧ ಯುವಕರನ್ನು ಮೂಲಭೂತವಾದಕ್ಕೆ ಪ್ರಚೋದಿಸುತ್ತಿದ್ದ.
ಆತನ ಸಾವು ಜೈಶ್ಗೆ, ವಿಶೇಷವಾಗಿ ಸ್ಥಳೀಯ ನೇಮಕಾತಿ ಮತ್ತು ಬ್ರೈನ್ವಾಶ್ ಜಾಲಕ್ಕೆ ದೊಡ್ಡ ಹೊಡೆತವಾಗಿದೆ. ಜೈಶ್ಗೆ ಸಂಬಂಧಿಸಿದ ಖಾತೆಗಳು ಆತನನ್ನು ಬಹಾವಲ್ಪುರದಲ್ಲಿ ಸಮಾಧಿ ಮಾಡಲಾಗಿದೆ ಎಂದು ಹೇಳಿವೆ. ಅನೇಕ ವರದಿಗಳ ಪ್ರಕಾರ, ಹೃದಯಾಘಾತದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಪರೇಷನ್ ಸಿಂದೂರ ನಂತರ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ನಡುಗಿದ್ದಾರೆ. ಅವರು ಭಾರತದ ವಿರುದ್ಧ ನಿರಂತರವಾಗಿ ವಿಷ ಕಾರುತ್ತಿದ್ದಾರೆ.
ಕಳೆದ ತಿಂಗಳು ನಡೆದ ರ್ಯಾಲಿಯಲ್ಲಿ, ಭಾರತದಿಂದ ಕಾಶ್ಮೀರವನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಆಗಾಗ ಭಾರತದ ವಿರುದ್ಧ ವಿಷ ಕಾರುತ್ತಿದ್ದ. ಕೆಲವು ಸಮಯದಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಕೊಲ್ಲುವ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯವರೆಗೆ, ಭಾರತದ ವಿರುದ್ಧದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 15 ಭಯೋತ್ಪಾದಕರನ್ನು ಪಾಕಿಸ್ತಾನದಲ್ಲಿ ಕೊಲ್ಲಲಾಗಿದೆ.