ಬಹುನಿರೀಕ್ಷಿತ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ

ಬಂಟ್ವಾಳ: ಬಹುನಿರೀಕ್ಷೆಯ ಕಲ್ಲಡ್ಕ ಪ್ರೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫೈ ಓವರ್ ಮೂಲಕ ಸಂಚರಿಸುತ್ತಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ ಪ್ರೈ ಓವರ್ ಆರಂಭಿಕ ಭಾಗವಾದ ಪೂರ್ಲಿ ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ, ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ, ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಫೈಓವರ್ ಸಂಚಾರವನ್ನು ಸ್ವಾಗತಿಸಿದ್ದಾರೆ.

ಈ ಸಂದರ್ಭ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಅನೇಕ ವರ್ಷಗಳ ಕನಸು ಕಲ್ಲಡ್ಕ ದಲ್ಲಿ ನನಸಾಗುವ ದಿನ ಇದು. ಇಡೀ ರಾಜ್ಯದಲ್ಲಿ ಬಹಳ ದೊಡ್ಡ ಸಂಪರ್ಕ ಸೇತು ಆಗಿರುವ ಈ ಫೈ ಓವರ್ ಕಲ್ಲಡ್ಕದಲ್ಲಿ ನಿರ್ಮಾಗೊಂಡಿದೆ. ಕೆ.ಎನ್.ಆರ್.ಸಂಸ್ಥೆಯವರು ಹೇಳಿದ ಸಮಯಕ್ಕೆ ಸರಿಯಾಗಿ ತುಂಬಾ ಚೆನ್ನಾಗಿ ಯಾವುದೇ ರೀತಿಯ ಮೋಸ ವಂಚನೆ ಇಲ್ಲದೆ ಕಾಮಗಾರಿ ಮುಗಿಸಿದ್ದಾರೆ. ಬೆಂಗಳೂರು-ಮಂಗಳೂರು ವಾಹನ ಸಂಚಾರ ಅತ್ಯಂತ ದೀರ್ಘ ಕಲ್ಲಡ್ಕ ಶ್ರೀರಾಮ ಮೇಲು_ವೆ ಸಂಚಾರಕ್ಕೆ ಮುಕ್ತಗೊಂಡಿದೆ.  ಇದಕ್ಕೆ ಕಾರಣೀಭೂತರಾದಂತಹ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಶ್ರೀ ಮಹಾಗಣಪತಿ, ಶ್ರೀರಾಮನನ್ನು ನೆನೆದುಕೊಂಡು ಪ್ರಾರಂಭಮಾಡುತ್ತಿದ್ದೇವೆ ಎಂದರು.

















































 
 

ಈ ಸಂದರ್ಭದಲ್ಲಿ ಮಾಜಿ ಶಾಸಕರುಗಳಾದ ಎ.ರುಕ್ಕಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಮಂಡಲ , ಎ.ಜಿ.ಎಮ್. ರೋಹಿತ್ ರೆಡ್ಡಿ ಡಿಎಮ್ ರಘನಾಥ ರೆಡ್ಡಿ, ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ ಅಯ್ಯಪ್ಪ ಸ್ಮಾಮಿ ಜನಾರ್ಧನ ಬೊಂಡಾಲ, ಶಂಭು ಕೋರ್ಯ ಲೋಕಾನಾಂದ, ಸುರೇಶ್ ಶೆಟ್ಟಿ, ಚಂದ್ರ ಶೇಖರ ಟೈಲರ್. ಪೂವಪ್ಪ, ಮಾದವ ಸಾಲ್ಯಾನ್, ಸನತ್ ರವಿಕುಮಾರ್, ಕೂಸಪ್ಪ, ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top