ಪುತ್ತೂರು ತಾಲೂಕು ಗ್ರಾಮಾಂತರ ಮಂಡಲ ವ್ಯಾಪ್ತಿಯ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಸರಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರುಮಾರು, ಶಾಂತಿಗೋಡು ಶಕ್ತಿ ಕೇಂದ್ರ ಅಧ್ಯಕ್ಷ ವಿಶ್ವನಾಥ್ ಬಲ್ಯಾಯ, ಬೂತ್ ಅಧ್ಯಕ್ಷ ವಿನೋದ್ ಕರ್ಪುತಮೂಳೆ, ಮಾಜಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್ ಕೈಂದಾಡಿ, ಅಶೋಕ್ ರೈ ಸೊರಕೆ,ನರಿಮೊಗರು ಗ್ರಾಮಪಂಚಾಯತ್ ಅಧ್ಯಕ್ಷೆ ಹರಿಣಿ ಪಂಜಾಳ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಡಿ, ನಿರ್ದೇಶಕರಾದ ಪ್ರವೀಣ್ ಶೆಟ್ಟಿ,ದೇವಪ್ಪ ಓಲಾಡಿ, ದೇವಪ್ಪ ಪಜಿರೋಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಕುಲಾಲ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
