ಪುತ್ತೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನೊಬ್ಬನನ್ನು ಪೊಲೀಸರು ಹಿಡಿದು ಠಾಣೆಗೆ ಕರೆದೊಯ್ದಿದ್ದಾರೆ.
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿ ಅರುಣಾ ಚಿತ್ರ ಮಂದಿರದ ಬಳಿ ಹಿಡಿದಿದ್ದಾರೆ.
ಸದ್ಯ ಆತನನ್ನು ಪುತ್ತೂರು ಠಾಣೆಗೆ ಕರೆದೊಯ್ದಿದ್ದಾರೆ.