ಉಡುಪಿ : ಕಾರು ಚಾಲಕನ ನಿರ್ಲಕ್ಷದಿಂದ ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ ಆಳ್ವಾಸ್ ಸಂಕೀರ್ತನ್ (28) ಮೃತಪಟ್ಟಿದ್ದಾರೆ
ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದ್ದು, ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ಅಜಾಗರೂಕತೆ ಯಿಂದ ಚಲಾಯಿಸುತ್ತಿದ್ದುದರಿಂದ ಕಾರು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತ ನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತ ಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಜನೆ ಹಾಡುಗಾರ ಕಿದಿಯೂರಿನ ಸುರೇಶ್ ಆಚಾರ್ಯ ಅವರ ಪುತ್ರನಾಗಿದ್ದ ಸಂಕೀರ್ತ ನ್ ತಬಲಾ, ಹಾರ್ಮೋನಿಯಂ ವಾದಕರಗಿದ್ದರು. ನಿತ್ಯಾನಂದ ಭಜನ ಮಂದಿರ, ಕನ್ನ ಪಾರ್ಡಿ ಜಯದುರ್ಗಾಪರಮೇಶ್ವರಿ, ಪ್ರಸನ್ನ ಗಣಪತಿ, ವೀರ ವಿಠಲ ದೇವಸ್ಥಾದಲ್ಲಿ ಭಜನ ಕಾರ್ಯಕ್ರಮ ದಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ಎಂಜಿನಿಯರ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದರು.