ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ

ಐಪಿಎಲ್‌ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ

ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್‌ ಗೆದ್ದುಕೊಂಡ ಆರ್‌ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್‌ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ ಹೇಳಿಕೆ ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿದೆ.

ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಇಂತಹ ಘಟನೆಗಳು ನಡೆದಾಗ ಭಾರತೀಯ ಕ್ರಿಕೆಟ್ ಮಂಡಳಿ ‘ಮೂಕ ಪ್ರೇಕ್ಷಕನಾಗಿ’ ಇರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

















































 
 

ಐಪಿಎಲ್‌ನಲ್ಲಿ ಚಾಂಪಿಯನ್‌ಶಿಪ್ ನಂತರದ ಆಚರಣೆಗಳನ್ನು ನಿಯಂತ್ರಿಸಲು ಮಂಡಳಿಯು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಯೋಚಿಸುತ್ತಿದೆ. ಈ ಆಚರಣೆಯನ್ನು ಆರ್‌ಸಿಬಿ ಖಾಸಗಿಯಾಗಿ ಆಯೋಜಿಸಿದ್ದರೂ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ತಡೆಯಲು ಬಿಸಿಸಿಐ ಬದ್ಧವಾಗಿದೆ.
ಆರ್​ಸಿಬಿ ವಿಜಯೋತ್ಸವದ ವೇಳೆ ನಡೆದ ಘಟನೆಗೆ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ಈ ಘಟನೆಯಿಂದ ಐಪಿಎಲ್‌ ಕೂಟದ ಹೆಸರು ಕೆಡಿಸಿಕೊಳ್ಳಲು ನಾವು ಬಯಸುವುದಿಲ್ಲ. ನಾವು ಮೂಕಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸೈಕಿಯಾ ಹೇಳಿದ್ದಾರೆ. ಈ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ. ದೇವಜಿತ್ ಸೈಕಿಯಾ ಅವರ ಈ ಹೇಳಿಕೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದಕ್ಕೂ ಮುನ್ನ ಐಪಿಎಲ್ ಟ್ರೋಫಿ ಗೆದ್ದಾಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ, ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ವಿಜಯೋತ್ಸವ ಆಚರಿಸಿತ್ತು. ಮುಂಬಯಿ ತಂಡ ಐದು ಬಾರಿ ಚಾಂಪಿಯನ್‌ ಆದಾಗಲೂ ವಿಜಯೋತ್ಸವ ಆಚರಿಸಲಾಗಿತ್ತು. ಆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ ಆರ್​ಸಿಬಿ ಫ್ರಾಂಚೈಸಿಯ ಗೆಲುವಿನ ಸಂಭ್ರಮದಿಂದಾಗಿ 11 ಮಂದಿ ಜೀವ ತೆತ್ತಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಇಂತಹ ಘಟನೆಗಳು ಐಪಿಎಲ್​ನ ಬ್ರ್ಯಾಂಡ್ ವ್ಯಾಲ್ಯೂ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿಯೇ ಬಿಸಿಸಿಐ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸುತ್ತಿದೆ. ಒಂದು ವೇಳೆ ಈ ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ನೇರ ಕಾರಣ ಎಂಬುದು ಕಂಡು ಬಂದರೆ ಆರ್​ಸಿಬಿ ತಂಡಕ್ಕೆ ಒಂದು ವರ್ಷದ ನಿಷೇಧ ಹೇರಬಹುದು ಎನ್ನಲಾಗುತ್ತಿದೆ.

ತನಿಖೆಯಲ್ಲಿ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮ್ಯಾನೇಜ್ಮೆಂಟ್ ನೇರ ಕಾರಣ ಎಂಬುದು ಕಂಡು ಬಂದರೆ, ಬಿಸಿಸಿಐ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ. ಬೆಂಗಳೂರು ಫ್ರಾಂಚೈಸಿ ಮೇಲೆ ನಿಷೇಧ ಹೇರಿದರೂ ಅಚ್ಚರಿಪಡಬೇಕಿಲ್ಲ ಎಂದು ಮೂಲವೊಂದು ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top