ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲ ದಲ್ಲಿ ಕರಾಟೆ ತರಬೇತಿ ಉದ್ಘಾಟಿಸಲಾಯಿತು.

ಕರಾಟೆ ತರಬೇತಿಯನ್ನು ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಸ್ವ-ರಕ್ಷಣೆಗಾಗಿ ಕರಾಟೆ ಶಿಕ್ಷಣ ಪಿಎಂಶ್ರೀ ಯೋಜನೆಯ ಮಹತ್ತರ ಕಾರ್ಯಕ್ರಮವಾಗಿದ್ದು, ಕಳೆದ ಎರಡು ವರ್ಷಗಳಿಂದ 6 ಮತ್ತು 7 ನೇ ತರಗತಿಯ ಹೆಣ್ಣುಮಕ್ಕಳಿಗೆ ಮತ್ತು ಗಂಡು ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಇಲ್ಲಿ ಮಕ್ಕಳು ತಾಳ್ಮೆ, ಸಹನೆಯನ್ನು ಹಾಗೂ ಆತ್ಮರಕ್ಷಣಾ ಕೌಶಲಗಳನ್ನು ರೂಡಿಸಿಕೊಳ್ಳುತ್ತಾರೆ ಎಂದರು.

ಶಿಕ್ಷಕಿ ಹರಿಣಾಕ್ಷಿ ಸ್ವಾಗತಿಸಿ, ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.