ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್ ನೀಡಿದೆ. ಕಾಂಗ್ರೆಸ್ ಸಂಸದ ತುಕರಾಮ್ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ.
ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತುಕರಾಂ ವಿರುದ್ಧ ತನಿಖೆ ನಡೆಯುತ್ತಿದೆ. ತುಕರಾಂ ನಾಲ್ಕು ಬಾರಿ ಬಳ್ಳಾರಿಯ ಸಂಡೂರು ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಸಚಿವರೂ ಆಗಿದ್ದರು. ಇ.ಡಿ.ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.