ಜೈಲಿನಲ್ಲಿರುವ ರನ್ಯಾಳನ್ನು ತೀವ್ರ ವಿಚಾರಣೆಗೊಳಪಡಿಸಲಿರುವ ಐಟಿ ಇಲಾಖೆ
ಬೆಂಗಳೂರು : ಕನ್ನಡ ನಟಿ ರನ್ಯಾ ರಾವ್ ಒಳಗೊಂಡಿರುವ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಈಗ ಆದಾಯ ಕರ ಇಲಾಖೆಯೂ ಮುಂದಾಗಿದೆ. ಈಗಾಗಲೇ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿರುವ ರನ್ಯಾ ರಾವ್ ಈಗಲೂ ಜೈಲಿನಲ್ಲಿ ಇದ್ದಾಳೆ. ಅವಳ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಹೈಕೋರ್ಟ್ ಜಾಮೀನು ನೀಡಿದ್ದರೂ ಆಕೆ ಜೈಲಿನಿಂದ ಬಿಡುಗಡೆಯಾಗಿಲ್ಲ. ಈ ಮಧ್ಯೆ ಐಟಿ ಇಲಾಖೆ ಕೆಲವು ದಿನಗಳ ಕಾಲ ಆಕೆಯನ್ನು ವಿಚಾರಣೆ ಮಾಡಲು ಮುಂದಾಗಿದೆ.
ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ 14 ಕೆಜಿ ಚಿನ್ನದ ಜೊತೆ ಸಿಕ್ಕಿ ಬಿದ್ದಿದ್ದಳು. ರನ್ಯಾ ಐಪಿಎಸ್ ಅಧಿಕಾರಿಯ ಮಲಮಗಳು. ಅಕ್ರಮ ಚಿನ್ನ ಕಳ್ಳ ಸಾಗಾಟಕ್ಕೆ ಪೊಲೀಸ್ ವ್ಯವಸ್ಥೆಯನ್ನು ಬಳಕೆ ಮಾಡಿಕೊಂಡಿದ್ದು ತನಿಖೆ ವೇಳೆ ತಿಳಿದು ಬಂದಿತ್ತು. ಅಲ್ಲದೆ, ಈ ಮೊದಲು ಹಲವು ಬಾರಿ ಚಿನ್ನ ಕಳ್ಳ ಸಾಗಣೆ ಮಾಡಿ, ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದು ಕೂಡ ಬಹಿರಂಗ ಆಗಿದೆ.
ಈಗ ಐಟಿ ಇಲಾಖೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ರನ್ಯಾ ವಿಚಾರಣೆಗೆ ಅನುಮತಿ ಪಡೆದಿದೆ. ಇಂದಿನಿಂದ ಜೂನ್ 13ರವರೆಗೆ ವಿಚಾರಣೆ ನಡೆಯಲಿದೆ. ರನ್ಯಾ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಅಲ್ಲಿಯೇ ವಿಚಾರಣೆಗೆ ಒಳಗಾಗಲಿದ್ದಾಳೆ.
ಈ ಮೊದಲು ನಟಿ ರನ್ಯಾಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ, ಆದರೆ ಆಕೆ ಜೈಲಿನಿಂದ ಬಿಡುಗಡೆ ಆಗಿಲ್ಲ. ಇದಕ್ಕೆ ಕಾರಣ ಅವಳ ಮೇಲಿರುವ ಕೇಸ್. ರನ್ಯಾ ವಿರುದ್ಧ ಕಠಿಣವಾದ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ನಿಯಂತ್ರಣ ಕಾಯ್ದೆ (COFEPOSA) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇದರ ಅಡಿಯಲ್ಲಿ ಕೇಸ್ ದಾಖಲಾದರೆ ಜಾಮೀನು ಸಿಗೋದಿಲ್ಲ. ಬೇರೆ ಪ್ರಕರಣಗಳಲ್ಲಿ ಜಾಮೀನು ದೊರೆತರೂ ಬಿಡುಗಡೆ ಸಾಧ್ಯವಿಲ್ಲ.