ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ

ಸುಧೀರ್‌ ಕುಮಾರ್‌ ರೆಡ್ಡಿ ಮುಖ್ಯಸ್ಥ; ಮಂಗಳೂರಲ್ಲಿ ಕೇಂದ್ರ ಕಚೇರಿ

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಲಿದ್ದಾರೆ.

ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರ್ಕಾರ ಈ ವಿಶೇಷ ಪಡೆಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.



















































 
 

ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಇವು ಮೂರು ಕಂಪನಿಗಳಾಗಿ ಕಾರ್ಯ ನಿರ್ವಹಿಸಲಿವೆ. ಸದ್ಯಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಈ ವಿಶೇಷ ಕಾರ್ಯಪಡೆಯ ಹೊಣೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದಕ್ಕೆ ವಿಶೇಷ ಕಾರ್ಯಪಡೆ ಸಜ್ಜಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಈ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲೇ ಇರಲಿದೆ. ಕಾರ್ಯಪಡೆಯಲ್ಲಿ ತಲಾ 80 ಸಿಬ್ಬಂದಿಯನ್ನು ಒಳಗೊಂಡ ಮೂರು ಕಂಪನಿಗಳು ಇರಲಿವೆ. ಈ ಕಂಪನಿಗಳನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top