ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ಕೊಡುಗೆ | ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥವನ್ನು ಕೊಡುಗೆಯಾಗಿ ನೀಡಲಿದ್ದು, ಇದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಶನಿವಾರ (ಇಂದು) ನಡೆಯಿತು.

ದೇವಾಲಯದಲ್ಲಿ ಶಾಸ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿದ ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಆಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ ನೀಡಿಕೆ ನಡೆಯಿತು.

ಈ ಸಂದರ್ಭದಲ್ಲಿ ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಯ, ರಥಶಿಲ್ಪಿ ರಾಜಗೋಪಾಲ್ ಆಚಾರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.  ಇನ್ನೂ ರಥ ನಿರ್ಮಾಣಕ್ಕೆ ಸಾಂಕೇತಿಕವಾಗಿ ಭೆಳ್ಳಿ ಮತ್ತು ಮರ ಹಸ್ತಾಂತರ ನಡೆಯಲಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top