ಮಂಗಳೂರು: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಜೂ,6 ರಂದು ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿ ವೇಳೆಗೆ ಚೂರಿ ಇರಿತವಾಗಿತ್ತು. ಆರೋಪಿಗಳು ಮೃತಪಟ್ಟ ಯುವಕ ಕೌಶಿಕ್ ಪರಿಚಿತರೇ ಆಗಿದ್ದರು. ಒಂದು ತಿಂಗಳ ಹಿಂದೆ ಇವರ ನಡುವೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರದಲ್ಲಿ ಜೂನ್ 6ರಂದು ಯೆಯ್ಯಾಡಿಯ ಬಾರ್ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬುವರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದಾರೆ. ತಕ್ಷಣ ಆತನ ಜೊತೆಗಿದ್ದವರು ಕೌಶಿಕ್ನನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು, ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದರು.