ಎರಡು ಅಂಗಡಿ, ಒಂದು ವಾಹನ ನಾಶ
ಮಂಗಳೂರು : ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜ್ ಮುಂಭಾಗ ಗುಜರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ವ್ಯಾಪಿಸಿದೆ. ಎರಡು ಅಂಗಡಿ ಮತ್ತು ಒಂದು ಗೂಡ್ಸ್ ವಾಹನ ಬೆಂಕಿಯಿಂದ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೊತ್ತುಗಳಿಗೆ ಹಾನಿಯಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು. ಮೇಲ್ನೋಟಕ್ಕೆ ಗುಜರಿ ಅಂಗಡಿಯಲ್ಲಿ ಶಾರ್ಟ್ ಸಕ್ಯೂಟ್ನಿಂದಾಗಿ ಅನಾಹುತ ನಡೆದಿರಬಹುದು ಎಂಬ ಸಾಧ್ಯತೆ ಇದೆ.