ಬೀರಮಲೆ ಬೆಟ್ಟ ಪ್ರಜ್ಞಾ ಆಶ್ರಮದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿ ಸಭೆ ಪುತ್ತೂರಿನ ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮದಲ್ಲಿ ಶನಿವಾರ ಜರಗಿತು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಸಭೆಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಆಳ್ವ ಪಡುಮಲೆ, ಪ್ರತಿಷ್ಠಾನದ ಖಜಾಂಜಿ ಕೃಷ್ಣಶರ್ಮ ಅನಾರು, ಪಡುಮಲೆಯಲ್ಲಿ ಆ.17ರಂದು ಜರಗಲಿರುವ ಜಿಲ್ಲಾಮಟ್ಟದ ಕಾರ್ಯಾಗಾರ, ಕಯ್ಯೂರು ನಾರಾಯಣ ಭಟ್ ಶ್ರೀ ಎಡನೀರು ಮಠಾಧೀಶರ ಚಾತುರ್ಮಾಸ್ಯ ಕಾರ್ಯಕ್ರಮ,  ಸಹಕಾರಿ ಸಂಘದ ಚುನಾವಣೆ, ಪ್ರತಿಷ್ಠಾನದ ಸದಸ್ಯರಿಗೆ ಕೇತ್ರ ಸಂದರ್ಶನದ ಬಗ್ಗೆ ಮಾಹಿತಿ ನೀಡಿದರು.



















































 
 

ಈ ಸಂದರ್ಭದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.

ಬೌದ್ಧಿಕ ವಿಕಲಾಂಗರ ವಸತಿಯುತ ಕೇಂದ್ರದ ಬಗ್ಗೆ ಪುತ್ತೂರು ಘಟಕದ ಶಂಕರಿ ಶರ್ಮ ಮಾಹಿತಿ ನೀಡಿದರು.ಕೇಂದ್ರದ ನಿರ್ವಾಹಕರಾದ ಅಣ್ಣಪ್ಪ ಮತ್ತು ಜ್ಯೋತಿ ದಂಪತಿ ಮಾತನಾಡಿ, ಕೇಂದ್ರದಲ್ಲಿ 15 ಸದಸ್ಯರಿದ್ದು ದಾನಿಗಳ ಸಹಕಾರದಿಂದ ಕೇಂದ್ರವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿಷ್ಠಾನದ  ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಆಳ್ವ ಪಡುಮಲೆ ವಂದಿಸಿದರು. ಬಾಲಕೃಷ್ಣರಾವ್. ಎ, ಪದ್ಮನಾಭ ನಾಯಕ್,ಚಂಚಲಾಕ್ಷಿ.ಯನ್, ಭವಾನಿ ಶಂಕರ ಶೆಟ್ಟಿ ಪುತ್ತೂರು,ಗುಂಡ್ಯಡ್ಕ ಈಶ್ವರ ಭಟ್, ಕೆ. ರಾಮಕೃಷ್ಣ ನಾಯಕ್, ಪ್ರೇಮಲತಾ ರಾವ್  ಟಿ, ಮಹಾಬಲ  ರೈ ವಳತಡ್ಕ, ಸೋಮನಾಥ ಬೇಕಲ್, ಚಂದ್ರಕಲಾ ಬೇಕಲ್ ಸಭೆಯಲ್ಲಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top