ಕಾಂತಾರ-1 ಶೂಟಿಂಗ್‌ನಲ್ಲಿ ಇನ್ನೊಂದು ಅವಘಡ : ಜಲಾಶಯದಲ್ಲಿ ದೋಣಿ ಪಲ್ಟಿ

ಶಿವಮೊಗ್ಗ: ಕಾಂತಾರ-1 ಚಿತ್ರತಂಡಕ್ಕೆ ಇನ್ನೊಂದು ಅವಘಡ ಎದುರಾದ ಕುರಿತು ವರದಿಯಾಗಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿ ಸಮೀಪ ಶೂಟಿಂಗ್‌ ನಡೆಯುತ್ತಿದ್ದಾಗ ದೋಣಿ ಮಗುಚಿ ಬಿದ್ದು ಅವಘಡ ಸಂಭವಿಸಿದೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ. ಬೋಟ್‌ನಲ್ಲಿ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿಯವರೂ ಇದ್ದರು ಎನ್ನಲಾಗಿದೆ.

ಕಾಂತಾರ-1 ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್​ನಲ್ಲಿ ಸಂಭವಿಸಿದೆ. ಆದರೆ ಯಾವುದೇ ಪ್ರಾಣಾಪಾಯ ನಡೆದಿರುವ ವರದಿ ಆಗಿಲ್ಲ.

ಬೋಟ್​​ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮಗುಚಿದೆ. ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.



















































 
 

ತೀರ್ಥಹಳ್ಳಿ ಸಮೀಪ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮಗುಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮರಾ ಇನ್ನಿತರ ಉಪಕರಣಗಳು ನೀರು ಪಾಲಾಗಿವೆ ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top