ಪುತ್ತೂರು ಸಂಚಾರ ಠಾಣೆಯ ಹೆಡ್‍ ಕಾನ್‍ ಸ್ಟೇಬಲ್‍ ಶಿವಪ್ರಸಾದ್ ಹೃದಯಾಘಾತದಿಂದ ನಿಧನ

ಪುತ್ತೂರು: ಸಂಚಾರ ಪೊಲೀಸ್ ಠಾಣೆ ಹೆಡ್‌ ಕಾನ್‍ ಸ್ಟೇಬಲ್ ಗೂನಡ್ಕ ನಿವಾಸಿ ಶಿವ ಪ್ರಸಾದ್ (51) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.

ಅವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ವರ್ಷದಲ್ಲಿ ಟ್ರಾಫಿಕ್ ವಿಭಾಗದಲ್ಲಿ ಎ ಎಸ್ ಐ ಭಡ್ತಿ ಹೊಂದಲಿದ್ದರು ಎಂದು ತಿಳಿದುಬಂದಿದೆ.

ಮೃತರು ಪತ್ನಿ ಸುಲೋಚನಾ, ಪುತ್ರಿಯರಾದ ರಮ್ಯಾ, ಅರ್ಚನಾ, ಪುತ್ರ ತೇಜಸ್ ಬಂಧು ಮಿತ್ರರನ್ನು ಅಗಲಿದ್ದಾರೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top