ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚಿಂತನ್ ಎಂಬವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಭಾನುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ಚಿಂತನ್, ಅವರ ಪತ್ನಿ ಹಾಗು ಪುತ್ರಿ ವಾಸ್ತವ್ಯ ಹೊಂದಿದ್ದರು. 4 ವರ್ಷಗಳ ಹಿಂದೆಯಷ್ಟೆ ಚಿಂತನ್ ಅವರ ವಿವಾಹ ಸುರತ್ಕಲ್ ನ. ರೇಷ್ಮಾ ಅವರ ಜೊತೆ ನಡೆದಿತ್ತು. ಭಾನುವಾರ ರಾತ್ರಿ ರೇಷ್ಮಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಪೊಲೀಸರು ಆಗಮಿಸಿ ಮಾಹಿತಿ ಪಡೆದಿದ್ದಾರೆ. ಚಿಂತನ್ ಅವರು ಈ ಹಿಂದೆ ನಲ್ಲಿಕಟ್ಟೆ ವಾರ್ಡ್ನಲ್ಲಿ ನಗರಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದರು.