ರಾಜ್ಯದ ಸರಕಾರಿ, ಅನುದಾನಿತ ಶಾಲೆಗಳಲ್ಲಿ ತಿಂಗಳ ಒಂದು ಶನಿವಾರ ಬ್ಯಾಗ್‍ ರಹಿತ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್‍ ರಹಿತ ‘ಸಂಭ್ರಮ ಶನಿವಾರ’ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್ ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂವಿವರಣಾತ್ಮಕ ಮಾಡ್ಯೂಲ್ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ನೀಡಿದೆ.2025-26 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ತಿಂಗಳ ಒಂದು ಶನಿವಾರ ಮಕ್ಕಳು ಬ್ಯಾಗ್‍ ರಹಿತ ಶಾಲೆಗೆ ತೆರಳಬೇಕು ಎಂದು ಸೂಚನೆ ನೀಡಲಾಗಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top