ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು

ನಗರದ ಹೊರವಲಯ ಜಪ್ಪಿನಮೊಗರಿನಲ್ಲಿ ಸಂಭವಿಸಿದ ಅಪಘಾತ

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ.

ಕದ್ರಿ ನಿವಾಸಿಗಳಾದ ಈ ಇಬ್ಬರು ಯುವಕರು ಕಾರಿನಲ್ಲಿ ತಲಪಾಡಿಗೆ ಊಟಕ್ಕೆ ಹೋಗಿದ್ದರು. ಹಿಂತಿರುಗುತ್ತಿದ್ದಾಗ ಜಪ್ಪಿನಮೊಗರು ಬಳಿ ಅವರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



















































 
 

ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಅವರು ಪಕ್ಷದ ಸಂಘಟನೆಯಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top