ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರು ಬಳಸಿ ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ED ವಿಚಾರಣೆಗೆ ಡಿ. ಕೆ. ಸುರೇಶ್ ಇಂದು ಹಾಜರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ. ಸುರೇಶ್ಗೆ ED ಅಧಿಕಾರಿಗಳು ಈ ಹಿಂದೆಯೇ ನೊಟೀಸ್ ಜಾರಿ ಮಾಡಿದ್ದರು. ಕಾಲಾವಕಾಶ ಕೇಳಿದ್ದ ಅವರು ಇಂದು ವಿಚಾರಣೆಗೆ ಹಾಜರಾಗಿರುವುದಾಗಿದೆ. ಶಾಂತಿನಗರದ ED ಕಚೇರಿಯಲ್ಲಿ ಈ ವಿಚಾರಣೆ ನಡೆದಿದೆ. ಈ ಸಂದರ್ಭದಲ್ಲಿ ಕಚೇರಿಯ ಪರಿಸರದಲ್ಲಿ ಭದ್ರತಾ ದೃಷ್ಟಿಯಿಂದ 100 ಪೋಲೀಸರನ್ನು ನಿಯೋಜನೆ ಮಾಡಲಾಗಿತ್ತು.
ವಿಚಾರಣೆಗೂ ಮುನ್ನ ಮಾತನಾಡಿದ ಅವರು ‘ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ತಾನು ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿಯೂ ಅವರು ಹೇಳಿದ್ದಾರೆ.
























