ಪುತ್ತೂರು: ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ಬೆಂಗಳೂರಿನಲ್ಲಿ ಇಂದು ನಿಧನರಾದರು.
ಸತೀಶ್ ಕುಮಾರ್ ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟರ್, ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಟ್ನರ್, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಆಗಿದ್ದರು.
ಮೃತರು ತಾಯಿ, ಮಕ್ಕಳಾದ ಅನಿರುದ್ಧ, ಅನುರಾಗ್ ಮತ್ತು ಅಣ್ಣ ಬೆಂಗಳೂರಿನ ಹೊಟೇಲ್ ಉದ್ಯಮಿ ಹರೀಶ್, ತಮ್ಮ ರಿಪಬ್ಲಿಕ್ ಟಿ.ವಿ ಚಾನಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
























