ಪುತ್ತೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಶುಕ್ರವಾರ ಪಾದಾರ್ಪಣೆ ಮಾಡಿತು.

ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಸತೀಶ್ ಪಾಂಬಾರು, ಶಾಖಾ ಅಧ್ಯಕ್ಷರಾದ ತೇಜಸ್ವಿನಿ ಕಟ್ಟಪುಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ, ಶಾಖಾ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.
























