ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರೊಂದಿಗೆ ಎರಡನೆಯ ದಿನವೂ ದೂರುಗಳ ಸುರಿಮಳೆದೈದಿದ್ದಾರೆ.
ಕಾಂಗ್ರೆಸ್ ನಾಯಕರುಗಳ ಜೊತೆಗೆ ಸುರ್ಜೇವಾಲಾ ನಡೆಸಿದ ಮ್ಯಾರಥಾನ್ ಮುಖಾಮುಖಿ ಸಭೆಯಲ್ಲಿ ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೂರುಗಳ ಮಳೆಯನ್ನೇ ಸುರಿಸಿದ್ದಾರೆ.
ಸುಮಾರು 20 ಕ್ಕೂ ಅಧಿಕ ಕಾಂಗ್ರೆಸ್ ಶಾಸಕರುಗಳ ಜೊತೆಗೆ ಸಭೆ ನಡೆಸಿದ್ದು, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸಾಕಷ್ಟು ಅನುದಾನ ನೀಡುವಂತೆ, ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ವಿನಂತಿಸಿದ್ದಾರೆ. ಹಾಗೆಯೇ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಬಗೆಗೂ ಅವರು ಸುರ್ಜೇವಾಲಾ ಅವರ ಗಮನ ಸೆಳೆದಿದ್ದಾರೆ.
























