ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ದ್ವೇಷ ಭಾಷಣ ನಿಯಂತ್ರಣ ಮಾಡುವಂತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಿಯಂತ್ರಿಸುವ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ನ್ಯಾಯಮೂರ್ತಿ ಕೆ.ವಿ.‌ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠವು ಸರ್ಕಾರಗಳು ಜನರಿಗೆ ವಾಕ್ ಸ್ವಾತಂತ್ರ್ಯದ ಮೌಲ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದಿದೆ. ಇನ್ಸ್ಟಾಗ್ರಾಮ್ ಇನ್ಫುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ದೂರುದಾರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ಈ ಸೂಚನೆ ನೀಡಿರುವುದಾಗಿದೆ.

ದ್ವೇಷ ಭಾಷಣಗಳನ್ನು ನಿಯಂತ್ರಣ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಜನರು ದ್ವೇಷ ಭಾಷಣಗಳನ್ನು ಶೇರ್ ಮಾಡುವ ಮತ್ತು ಲೈಕ್ ಮಾಡುವ ಪ್ರವೃತ್ತಿ ಕಡಿಮೆಯಾಗಬೇಕು, ಅಂತಹವುಗಳನ್ನು ನಿರ್ಬಂಧಿಸಬೇಕು ಎಂದು ಕೋರ್ಟ್ ತಿಳಿಸಿದೆ.





















































 
 
error: Content is protected !!
Scroll to Top