ಪುತ್ತೂರು : ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಇಂದು (ಜು.24) ಶಾಲೆಗಳಿಗೆ ರಜೆ ಸಾರಲಾಗಿದ್ದು, ಇದರೊಂದಿಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಿಗೆ ರಜೆ ನೀಡಿದಂತಾಗಿದೆ.
ಪುತ್ತೂರು ತಾಲೂಕಿನ ಎಲ್ಲ ಅಂಗನವಾಡಿ, ಕೇಂದ್ರಗಳು, ಪ್ರಾಥಮಿಕ ಶಾಳೆಗಳು, ಪ್ರೌಢಾಲೆಗಳು, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ನೀಡಲಾಗಿದೆ. ನೀರು ಹರಿಯುವ ತಗ್ಗು ಪ್ರದೇಶಗಳು, ಕೆರೆಮ ನದಿತೀರಗಳಿಗೆ ಮಕ್ಕಳು ಹೋಗದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

