ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಸಂಸತ್ ಅಧಿವೇಶನದಲ್ಲಿ 16 ಗಂಟೆಗಳ ಕಾಲ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.
ಜುಲೈ 28 ರಂದು ಲೋಕಸಭೆ ಮತ್ತು ಜುಲೈ 29 ರಂದು ರಾಜ್ಯಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯ ಸಂಸದೀಯ ಸಲಹಾ ಸಮಿತಿ ಸಭೆ ನಡೆದಿದ್ದು ಮೇಲ್ಮನೆಯಲ್ಲಿ ಜುಲೈ 29 ರಂದು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಲೋಕಸಭೆಯಲ್ಲಿ 16 ಗಂಟೆಗಳ ಕಾಲ ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಬೇಕು ಎಂದು ವಿಪಕ್ಷಗಳು ಬೇಡಿಕೆ ಇಟ್ಚಿದ್ದು, ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಾರತಕ್ಕೆ ಹಿಂದಿರುಗಿದ ಮೇಲೆ ಮುಂದಿನ ವಾರ ಚರ್ಚೆಗೆ ದಿನ ನಿಗದಿ ಮಾಡಲಾಗಿರುವುದಾಗಿ ಹೇಳಲಾಗಿದೆ.
























