ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಚುನಾವಣಾ ಆಯೋಗಕ್ಕೆ ಜೆಡಿಎಸ್ ನಿಯೋಗ ದೂರು ನೀಡಿದೆ.
ದೂರಿನಲ್ಲಿ, ಕಾಂಗ್ರೆಸ್ ಮತಗಳ್ಳತನದ ಆರೋಪ ದಲ್ಲಿ ಪ್ರತಿಭಟನೆ ನಡೆಸಿದ್ದು ಈ ಆರೋಪ ಸುಳ್ಳು. ಹಾಗೆಯೇ ಚುನಾವಣಾ ಆಯೋಗದ ವಿರುದ್ದ ಮಾಡಿರುವ ಆರೋಪ ಸಹ ಹುರುಳಿಲ್ಲದ್ದು. ಆದ್ದರಿಂದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.
ನಿಯೋಗದಲ್ಲಿ ಜೆಡಿಎಸ್ ಎಂಎಲ್ಸಿ ಕೆ.ಎ. ತಿಪ್ಪೆರುದ್ರಸ್ವಾಮಿ, ಮುಖಂಡರಾದ ಜವರಾಯಿ ಗೌಡ, ಹೆಚ್. ಎನ್. ದೇವರಾಜ್ ಸೇರಿದಂತೆ ಇನ್ನಿತರರು ಇದ್ದರು
























