ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಅಸಾಧಾರಣ ಶೌರ್ಯ ಮೆರೆದ 16 ಮಂದಿ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಿಸಿದೆ.
ಆಪರೇಷನ್ ಸಿಂಧೂರ್ ಸಮಯದಲ್ಲಿ ಅಚಲ ಪರಾಕ್ರಮ ತೋರಿದ ಸಾಹಸಿ ಬಿಎಸ್ಎಫ್ ಯೋಧರಿಗೆ ಶೌರ್ಯ ಪ್ರಶಸ್ತಿ ಘೋಷಿಸಲಾಗಿದ್ದು, ಸ್ವಾತಂತ್ರ್ಯ ದಿನದಂದು ಪುರಸ್ಕಾರ ಪ್ರಧಾನ ನಡೆಯಲಿದೆ.
ಈ ಸಂಬಂಧ ಬಿಎಸ್ಎಫ್ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದು, ಈ ಪುರಸ್ಕಾರಗಳು ಗಡಿ ಭದ್ರತಾ ಪಡೆಯ ಮೇಲೆ ದೇಶ ಇರಿಸಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದೆ.
























