ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿದ ಹಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿದ್ದು, ಎಸ್ಸಿ ಸಮುದಾಯದಲ್ಲಿ 101 ಜಾತಿಗಳಿವೆ. ಯಾವುದಕ್ಕೂ ಅನ್ಯಾಯವಾಗದ ಹಾಗೆ ನಿರ್ಣಯಗಳನ್ನು ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿ ಎಂ ಸಿದ್ದರಾಮಯ್ಯ ಅವರೇ ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ಸಂದರ್ಭದಲ್ಲಿ ದೃಢ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

