ರಾಮನಗರ: ದೇಗುಲದಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ.
ಮೃತನನ್ನು ದುಂಡನಹಳ್ಳಿ ಗ್ರಾಮದ ರಮೇಶ್ ಎಂಬಾತ ಎಂ.ಕೆ. ದೊಡ್ಡಿ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ರಮೇಶ್, ಆತನ ಪುತ್ರ ಮಂಜು ಮತ್ತು ಕೋಲಾರದ ಅನಿಲ್ನನ್ನು ದೇವಸ್ಥಾನದಲ್ಲಿ ಕಳ್ಳತನ ನಡೆಸಿದ ಆರೋಪದಲ್ಲಿ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ರಮೇಶ್ ಬುಧವಾರ ಶೌಚಾಲಯಕ್ಕೆ ಹೋಗುವುದಾಗಿ ತಿಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಟುಂಬಸ್ಥರು ಇದನ್ನು ಲಾಕಪ್ಡೆತ್ ಎಂದು ಆರೋಪಿಸಿದ್ದಾರೆ.
























