ಮೈಸೂರು: ಈ ಬಾರಿಯ ನಾಡ ಹಬ್ಬ ದಸರಾ ಹಬ್ಬದ ಮೆರುಗು ಹೆಚ್ಚಿಸುವ ಸಲುವಾಗಿ ವೈಮಾನಿಕ ಪ್ರದರ್ಶನ (ಏರ್ ಶೋ) ಆಯೋಜನೆ ಮಾಡಲಾಗುತ್ತಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದಿರುವ ಧನ್ಯವಾದ ಪತ್ರದಲ್ಲಿ ಈ ಮಾಹಿತಿ ಲಭ್ಯವಾಗಿದೆ. ಆದರೆ ಈ ಏರ್ ಶೋ ಎಲ್ಲಿ ಮತ್ತು ಯಾವಾಗ ಆಯೋಜನೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಎರಡು ತಿಂಗಳ ಹಿಂದೆ ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರನ್ನು ಭೇಟಿಯಾಗಿ ಖುದ್ದಾಗಿ ಮನವಿ ಸಲ್ಲಿಸಿದ್ದರು. ರಾಜನಾಥ ಸಿಂಗ್ ಅವರು ಸಹ ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದರು. ದಸರಾ ಉತ್ಸವಕ್ಕೂ ರಾಜನಾಥ್ ಸಿಂಗ್ ಅವರಿಗೆ ಸಿಎಂ ಆಹ್ವಾನ ನೀಡಿದ್ದಾಗಿ ತಿಳಿದು ಬಂದಿದೆ.
























