ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್ಐಟಿ ಇಂದು ಬೆಳಗ್ಗೆ ಬಂಧಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಮುಸುಕುಧಾರಿ ವ್ಯಕ್ತಿಯ ನಂಬಿ ಸರ್ಕಾರ ವಿಶೇಷ ತನಿಖಾ ತಂಡ ರಕ್ಷಿಸಿತ್ತು. ಈ ತಂಡ ಆತ ತೋರಿಸಿದ 17 ಜಾಗಗಳಲ್ಲಿ ಅಗೆದರೂ ಶವದ ಕುರುಹುಗಳು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಡೀ ಮುಸುಕುಧಾರಿಯನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸ್ವತಹ ವಿಚಾರಣೆ ನಡೆಸಿದ್ದಾರೆ . ಬಳಿಕ ಎಸ್ಐಟಿ ಹೆಚ್ಚಿನ ವಿಚಾರಣೆಗಾಗಿ ಅವನನ್ನು ಔಪಚಾರಿಕ ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.
























