RSS ಸಂಸ್ಕಾರ ಕಲಿಸುತ್ತದೆ: ಜನಾರ್ದನ ರೆಡ್ಡಿ

ಕೊಪ್ಪಳ: ಸಿ ಎಂ ಸಿದ್ದರಾಮಯ್ಯ ಅವರಿಗೆ RSS ಬಗ್ಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಜೋಕರ್‌ನಂತೆ ‌ಆಗಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಮ್ಮ ಪಕ್ಷದ ಹಿರಿಯರೆಲ್ಲರೂ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ‌ಗೆ ಏನು ಮಾತನಾಡಬೇಕು. ಏನು ಮಾತನಾಡಬಾರದು ಎನ್ನುವುದೇ ಗೊತ್ತಿಲ್ಲ. RSS ದೇಶದ ಸುರಕ್ಷತೆಗಾಗಿ ಸ್ಥಾಪನೆಯಾಗಿದ್ದು, ಇದು ಮಗುವಿಗೆ ಸಂಸ್ಕಾರ ಕಲಿಸುವ ಕೆಲಸವನ್ನು ಮಾಡುತ್ತದೆ. ಅಂತಹ ರಾಷ್ಟ್ರ ಭಕ್ತ ಸಂಘಟನೆಯ ಬಗ್ಗೆ ಮಾತನಾಡಿದ್ದಾರೆ ಪ್ರಿಯಾಂಕ್ ಖರ್ಗೆ‌. ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಮೆಚ್ಚಿಸಬೇಕು ಎಂಬ ಕಾರಣಕ್ಕೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ಕೆಲ ಸಮಯದ ಹಿಂದೆ ಡಿ. ಕೆ. ಶಿವಕುಮಾರ್ ಅವರು ವಿಧಾನ ಸಭೆಯಲ್ಲಿ RSS ಗೀತೆ ಹಾಡಿದರು. ಆ ಬಳಿಕ ಪಕ್ಷದಲ್ಲಿ ವಿರೋಧಗಳು ಹುಟ್ಟಿಕೊಂಡವು. ಆ ಕಾರಣದಿಂದ ಈಗ RSS ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌.





















































 
 
error: Content is protected !!
Scroll to Top