ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ

ನಿಟ್ಟೆ ಅಭಿಷೇಕ್‌ ಆಚಸರ್ಯ ಅತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೃತ್ಯ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಅವಮಾನ ಮತ್ತು ಮಾನಸಿಕ ಯಾತನೆಯನ್ನುಂಟು ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಯುವಕ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಸೆರೆಯಾಗಿರುವ ಆರೋಪಿ.

ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಅಶ್ಲೀಲ ವೀಡಿಯೊಗಳು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಅಭಿಷೇಕ್ ತನ್ನ ನೇಣು ಬಿಗಿದ ಫೋಟೋಗಳನ್ನು ದೂರುದಾರರಿಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.





















































 
 

ಅಭಿಷೇಕ್ ಸಾವಿನ ನಂತರ ಅವರ ಸಹೋದರ ಅಭಿಜಿತ್ ಆಚಾರ್ಯ ಮತ್ತು ಇತರರು ಅಭಿಷೇಕ್ ಅವರ ಡೆತ್‌ನೋಟ್ ಮತ್ತು ದೂರುದಾರರ ಅಶ್ಲೀಲ ಚಿತ್ರಗಳನ್ನು ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಗುಂಪುಗಳು ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿ ಮಹಿಳೆಯ ಮಾನಹಾನಿ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ತನಿಖೆಯ ಸಮಯದಲ್ಲಿ ಮಂಗಳೂರಿನ ಕಾವೂರು, ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಎಂಬ ಮತ್ತೊಬ್ಬ ವ್ಯಕ್ತಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಸಂದೇಶವನ್ನು ಕಳುಹಿಸಿದ್ದಾನೆ ಎಂಬುದಕ್ಕೆ ಪೊಲೀಸರಿಗೆ ಸಾಕ್ಷ್ಯಾಧಾರಗಳು ಲಭ್ಯವಾಗಿದೆ. ಎಲ್ಲ ಸಾಕ್ಷಿಯ ಆಧಾರದ ಮೇಲೆ, ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಅಕ್ಟೋಬರ್ 21ರಂದು ಆರೋಪಿಯನ್ನು ಬಂಧಿಸಿದರು. ಹೆಚ್ಚಿನ ತನಿಖೆಗಾಗಿ ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ಈ ಪ್ರಕರಣವನ್ನು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ತನಿಖೆ ನಡೆಸಲಾಗುತ್ತಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

error: Content is protected !!
Scroll to Top