ಲಂಚ ಸ್ವೀಕರಿಸಿದ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಹೊರಗುತ್ತಿಗೆ ನೌಕರನ ಸಂಬಳ ನೀಡಲು ಲಂಚ ಕೇಳಿದ್ದ ಭ್ರಷ್ಟ ಅಧಿಕಾರಿಗಳು

ಮಂಗಳೂರು: ಹೊರಗುತ್ತಿಗೆ ನೌಕರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರು ಅಧಿಕಾರಿಗಳನ್ನು ಗುರುವಾರ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳು.

ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶವನ್ನು ಮಾಡಿಸಿಕೊಡಲು ಕೃಷ್ಣಮೂರ್ತಿ 50,000 ರೂ, ಬಿ.ಕೆ.ರಾಜು 10,000 ರೂ., ಎಸ್.ಧನಶೇಖರ 10,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುಪಿಒಆರ್‌ನಲ್ಲಿ ಹೊರಗುತ್ತಿಗೆ ನೌಕರರಾಗಿರುವ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಕೃಷ್ಣಮೂರ್ತಿ 20,000 ರೂ., ಧನಶೇಖರ ಮತ್ತು ಬಿ.ಕೆ. ರಾಜು ತಲಾ 5,000 ರೂ. ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆದಿದ್ದಾರೆ.





















































 
 

ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್. ರವಿ ಪವಾರ್, ರಾಜೇಂದ್ರ ನಾಯ್ಡ್ ಎಂ.ಎನ್ ರವರು ಸಿಬ್ಬಂದಿ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದಾರೆ.

error: Content is protected !!
Scroll to Top