ಉಡುಪಿ : ನರೇಂದ್ರ ಮೋದಿಯ ರೋಡ್‌ ಶೋ ಆರಂಭ

ವಿಮಾನ ನಿಲ್ದಾಣದಲ್ಲಿ ದಿನೇಶ್‌ ಗುಂಡೂರಾವ್‌ ಸ್ವಾಗತ

ಮಂಗಳೂರು : ಉಡುಪಿಯ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಉಡುಪಿಗೆ ತೆರಳಿದ ಮೋದಿಯ ರೋಡ್‌ ಶೋ ಆರಂಭವಾಗಿದೆ.

ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.





















































 
 

ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಸ್ವಾಗತಿಸಿದರು. ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದರು.

error: Content is protected !!
Scroll to Top