ಕನ್ನಡದ ಕಿರುತೆರೆ ನಟಿ ಆತ್ಮಹತ್ಯೆ

ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾದ ನಟಿ

ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು.

ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.





















































 
 

ನಂದಿನಿ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ. ಅನಾರೋಗ್ಯ ಸಮಸ್ಯೆಯಿಂದ ನೊಂದಿದ್ದ ನಂದಿನಿ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

error: Content is protected !!
Scroll to Top