ಬೆಂಗಳೂರು: ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಗ್ಯಾಸ್ ಸ್ಫೋಟದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕ್ರಿಸ್ಮಸ್ ದಿನದಂದು ಅರಮನೆ ಮುಂದೆ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಸ್ಪೋಟವಾಗಿತ್ತು. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದರು.
ಮೃತರ ನೋವಿಗೆ ಸ್ಪಂದಿಸಿರುವ ಸಿ ಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರದ ಭರವಸೆ ನೀಡಿರುವುದಾಗಿದೆ.
























