ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಮತ್ತು ಮೋರ್ಲ ಕುಟುಂಬ ಸ್ವರ ಸಹಯೋಗದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್ ಅವರನ್ನು ಚಂದ್ರಹಾಸ ಶೆಟ್ಟಿ ಮೋರ್ಲ ಅವರ ಸ್ವಗೃಹದಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ ಮೋರ್ಲ, ಜಯಶ್ರೀ ಸಿ. ಶೆಟ್ಟಿ, ರತ್ನಾಕರ ಶೆಟ್ಟಿ ಮೋರ್ಲ, ಮುರಳಿಧರ ಶೆಟ್ಟಿ ಮೋರ್ಲ, ಶೈಲಜಾ ಶೆಟ್ಟಿ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಮಲ್ಲಿಕಾ ಜೆ. ರೈ ಗುಂಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು.
























