ಮಂಗಳೂರು ತಾಲೂಕು ಕಂದಾವರ ಪದವು ನಿವಾಸಿ ಖ್ಯಾತ ನಾಟಕಕಾರರು, ಕಲಾವಿದರು, ಸಾಮಾಜಿಕ ಕಾರ್ಯಕರ್ತರಾದ ಶ್ರೀ ಭರತ್ ಎಸ್. ಕರ್ಕೇರ ಇವರು ಭಾರತದ ಅತ್ಯಂತ ಪ್ರಸಿದ್ದ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮ ದಿನವಾದ “ರಾಷ್ಟ್ರೀಯ ಯುವ ದಿನಾಚರಣೆ”ಯ ನಿಮಿತ್ತ ಕವಿತ್ತ ಕರ್ಮಮಣಿ ಫೌಂಡೇಶನ್ (ರಿ.) ನಾಗರಮುನ್ನೋಳಿ ವತಿಯಿಂದ ಕೊಡಲ್ಪಡುವ ರಾಷ್ಟ್ರ ಮಟ್ಟದ ಗೌರವ ಪ್ರಶಸ್ತಿ”ಕಲಾ ವಿಭೂಷಣ ಪ್ರಶಸ್ತಿ – 2026 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಲಾ ಕ್ಷೇತ್ರದಲ್ಲಿ ಮತ್ತು ಸಮಾಜ ಸೇವಾ ಕಾರ್ಯದಲ್ಲಿ ತಮ್ಮದೇ ಆದ ವೈಶಿಷ್ಟ್ಯಪೂರ್ಣ ಶೈಲಿ ಹಾಗೂ ಪ್ರತೀಯೊಂದು ಸಾಹಿತ್ಯದಲ್ಲೂ ಸಾಮಾಜಿಕ ಚಿಂತನೆಗಳನ್ನು ಅಳವಡಿಸಿಕೊಂಡು, ಸಮಾಜಮುಖಿ ಬರಹಗಳನ್ನು ನೀಡಿದ ಹಿರಿಮೆ ಇವರದ್ದು.
ಜೊತೆಗೆ ಬೀದಿನಾಟಕ , ರಂಗ ನಾಟಕ, ಆಪ್ತ ರಂಗಭೂಮಿಯಲ್ಲಿಯೂ ಕಲಾವಿದರಾಗಿ ಕಲಾಮಾತೆಯ ಸೇವಗೈದು ಕಲಾಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಶ್ರೀ ಭರತ್ ಎಸ್. ಕರ್ಕೇರ ಅವರು ಕಲಾವಿದರುಗಳಿಗೆ ಪ್ರೇರಣೆಯಾಗಿದ್ದು, ಕಲಾಸಂಸ್ಕೃತಿಯ ಉಳಿವಿಗೆ ತಮ್ಮ ಸೇವೆಯನ್ನು ಸಮರ್ಪಿಸಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ನೀಡಲಾಗುತ್ತಿರುವ ಕಲಾ ವಿಭೂಷಣ ಪ್ರಶಸ್ತಿ – 2026 ಕಲಾ ವಲಯದಲ್ಲಿ ಸಂತಸ ಮತ್ತು ಹೆಮ್ಮೆಗೆ ಕಾರಣವಾಗಿದೆ.
ಇವರು ಸಾಹಿತ್ಯ ಹಾಗೂ ರಂಗಭೂಮಿಯಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ , ಈ ಗೌರವ ಪ್ರಶಸ್ತಿಯನ್ನು ನೀಡುತ್ತಿದ್ದು ಜನವರಿ 25 ರಂದು ಬೆಳಗಾವಿ ಜಿಲ್ಲೆಯ ನಾಗರಮುನ್ನೋಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವ ಪೂರ್ವಕವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಲಾಗಿದೆ.
ಈ ಗೌರವಕ್ಕಾಗಿ ವಿವಿಧ ಸಂಘ–ಸಂಸ್ಥೆಗಳು, ಕಲಾಭಿಮಾನಿಗಳು ಹಾಗೂ ಬಂಧು–ಮಿತ್ರರು ಶ್ರೀ ಕರ್ಕೇರ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
























