ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಅಸಮಾಧಾನ ಎದ್ದಿದೆ.
ಈ ಬಗ್ಗೆ ಮಾತನಾಡಿರುವ ಡಿ.ಸಿ.ಎಂ. ಡಿ. ಕೆ. ಶಿವಕುಮಾರ್ ಅವರು ಮೆಟ್ರೋ ದರ ಪರಿಷ್ಕರಣೆಗೆ ಸಂಬಂಧಿಸಿದ ಹಾಗೆ ಮಾತನಾಡುತ್ತೇವೆ. ಯಾವ ಕಾರಣಕ್ಕೂ ಜನರಿಗೆ ಸಮಸ್ಯೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳ ಮೂಲಕ ಮೆಟ್ರೋ ದರ ಏರಿಕೆಯಾಗಿದೆ ಎನ್ನುವುದನ್ನು ನೋಡಿದ್ದೇನೆ. ಈ ಬಗ್ಗೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಕೇಂದ್ರ ಸರ್ಕಾರದ ಚೇರ್ಮನ್ ಮೆಟ್ರೋ ಚೇರ್ಮನ್ ಆಗಿದ್ದಾರೆ. ಇಂದು ಅಥವಾ ನಾಳೆ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
























