ತುಮಕೂರು: ದ್ವಿಚಕ್ರ ವಾಹನ ಮತ್ತು ಖಾಸಗಿ ಬಸ್ ಒಂದರ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಸಾತಟ್ಟದಲ್ಲಿ ನಡೆದಿದೆ.
ಮಿಟ್ರಳ್ಳಿಯ ಗಂಗಯ್ಯ (60) ಎಂಬವರೇ ಮೃತ ದುರ್ದೈವಿ.
ಸಹಸವಾರ ಲಿಂಗಣ್ಣ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























