ವಿವಿಧ ಕಾರ್ಯಕ್ರಮಗಳೊಂದಿಗೆ ಬಾರ್ಯ ಜಾತ್ರೋತ್ಸವ ಸಂಪನ್ನ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.

ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ ,ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಪುತ್ತಿಲ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ , ತಾಂಬೂಲ ಕಲಾವಿದರು ಪುಂಜಾಲಕಟ್ಟೆ ತಂಡದಿಂದ ತುಳು ನಾಟಕ ,ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ತಂಡದಿಂದ ಜಾಂಬವತಿ ಕಲ್ಯಾಣ ತಾಳಮದ್ದಳೆ, ದೇವರಿಗೆ ಪಂಚ ವಿಂಶತಿ ಕಲಶಾಭಿಷೇಕ, ನಾಗತಂಬಿಲ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನ ಸಂತರ್ಪಣೆ, ಗ್ರಾಮ ದೈವ ಪಂಜುರ್ಲಿ ನೇಮೋತ್ಸವದೊಂದಿಗೆ ಜರಗಿತು.

ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ, ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಉತ್ಸವ ಸಮಿತಿ ಸಂಚಾಲಕ ಯಜ್ಞೇಶ ಪುತ್ತಿಲ, ಟ್ರಸ್ಟ್ ಪದಾಧಿಕಾರಿಗಳಾದ ಪ್ರಶಾಂತ ಪೈ ಬಾರ್ಯ ,ರಾಜೇಶ್ ರಾವ್ ,ವಿದ್ಯಾ ಪ್ರಭಾಕರ, ಪ್ರಶಾಂತ ಕುಮಾರ್, ಪ್ರವೀಣ.ಯಂ, ಮನೋಹರ ಶೆಟ್ಟಿ, ನಾರಾಯಣಗೌಡ, ಶ್ರೀಮತಿ ನವೀನ, ಜಿ . ಉಮೇಶ,ಚೇತನ್ ಕುಮಾರ್ ,ಶಿವರಾಮ ನಾಯ್ಕ, ಬಾಲಕೃಷ್ಣ ಶೆಟ್ಟಿ , ವಿಶ್ವನಾಥ ಗೌಡ, ವಿಜಯಲಕ್ಷ್ಮೀ ರೈ ಬಾರ್ಯ,ಮೋನಪ್ಪ ಗೌಡ, ಸುದೇಶ. ಕೆ, ರಾಮಣ್ಣಗೌಡ , ಅರುಣ ಬಂಗೇರ, ಸುದರ್ಶನ.ಕೆ ಹಾಗೂ ಊರ ಹತ್ತು ಸಮಸ್ತರು ಮತ್ತು ಸ್ವಯಂಸೇವಕರು ಜಾತ್ರೆಯ ಯಶಸ್ಸಿಗೆ ಸಹಕಾರ ನೀಡಿದರು. ನೇಮೋತ್ಸವದಲ್ಲಿ 9 ಗುತ್ತಿನ ಮನೆಯವರು ಭಾಗವಹಿಸಿದ್ದರು.





















































 
 

error: Content is protected !!
Scroll to Top