ಮೂರು ವರ್ಷಗಳಿಂದ ತಪ್ಪಿಸಿಕೊಂಡಿರುವ ಲಷ್ಕರ್ನ ಉಗ್ರ
ಬೆಂಗಳೂರು: ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ ಉಗ್ರನಿಗಾಗಿ ಕಳೆದ ಮೂರು ವರ್ಷದಿಂದ ಎನ್ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ನಗರದ ಜನನಿಬಿಡ ಪ್ರದೇಶ ಮೆಜೆಸ್ಟಿಕ್ನಲ್ಲಿ ವಾಂಟೆಡ್ ಉಗ್ರನ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ಬಹುಮಾನ ಕೊಡುವುದಾಗಿ ಪೋಸ್ಟರ್ ಹಾಕಿದ್ದಾರೆ. 2023ರಲ್ಲಿ ಸಿಸಿಬಿ ಪೊಲೀಸರು ಭೇದಿಸಿದ ಉಗ್ರ ಸಂಚಿನ ಪ್ರಕರಣದ ಪ್ರಮುಖ ರೂವಾರಿ ಜುನೈದ್ ಅಮಹ್ಮದ್. ಉಗ್ರ ತನ್ನ ಮನೆಯಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನ ವಶಪಡಿಸಿಕೊಂಡ ಪ್ರಕರಣದಲ್ಲಿ ಬೇಕಾಗಿದ್ದಾನೆ.
ಈ ಹಿಂದೆ ರಕ್ತಚಂದನ ಕೇಸ್ನಲ್ಲಿ ಬಂಧನವಾಗಿದ್ದ ಜುನೇದ್ ಅಹ್ಮದ್, ನಂತರ ಜೈಲಿನಲ್ಲಿ ಟಿ.ನಾಸೀರ್ನಿಂದ ಪ್ರೇರಿತನಾಗಿ ಉಗ್ರ ಸಂಘಟನೆ ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ದುಬೈ ಹೋಗಿ ಅಲ್ಲಿಂದ ಸಹಚರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿರುವ ಆರೋಪ ಇದೆ. ಬೆಂಗಳೂರು ನಾಗಶೆಟ್ಟಿ ಹಳ್ಳಿ ನಿವಾಸಿಯಾಗಿದ್ದ ಜುನೇದ್ ಅಹ್ಮದ್.
























