ಬೆಂಗಳೂರು: ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಕಾಲೇಜಿನಿಂದ ಆ್ಯಕ್ಟಿವಾ ಮೂಲಕ ತೆರಳುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಸಮೀಪ ಈ ದುರಂತ ನಡೆದಿದೆ. ಕೃತಿಕಾ (21) ಎಂಬವರೇ ಮೃತ ದುರ್ದೈವಿ. ಹಿಂಬದಿ ಸವಾರೆ ಹಂಸ ಎಂಬವರು ಗಂಭೀರ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಎಂಬಿಬಿಎಸ್ ವಿದ್ಯಾರ್ಥಿನಿಯರು ಕಾಲೇಜು ಮುಗಿಸಿ ಆ್ಯಕ್ಟಿವಾ ಮೂಲಕ ಗೇಟ್ ಹೊರಗೆ ಬರುತ್ತಿದ್ದರು. ಈ ವೇಳೆ ಅತಿವೇಗದಿಂದ ಬಂದ ಟಿಪ್ಪರ್ ಆ್ಯಕ್ಟಿವಾಗೆ ಗುದ್ದಿದೆ.
ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























