ಮಂಗಳೂರು: ಕೋಮು ದ್ವೇಷ ಬಿತ್ತುವ ಕಾಮೆಂಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ.
ಕಳೆದ ಜನವರಿ ತಿಂಗಳಿನಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್ನಲ್ಲಿ ಕುರಾನ್ ಪಠಣ ಸ್ಪರ್ಧೆ ನಡೆಯುತ್ತಿತ್ತು. ಇದು ಉದಯವಾಣಿ ಫೇಸ್ಬುಕ್ ಪೇಜ್ನಲ್ಲಿ ಪ್ರಕಟವಾಗುತ್ತಿತ್ತು. ಈ ಸಂದರ್ಭದಲ್ಲಿ ಆರೋಪಿ ಗಣೇಶ್ ಪ್ರಸಾದ್ ತನ್ನ ಫೇಸ್ಬುಕ್ ಪೇಜಿನಿಂದ ಪ್ರಚೋದನಾಕಾರಿ ಕಾಮೆಂಟ್ ಹಾಕಿದ್ದಾನೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

























