ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್

ಮೂಡುಬಿದಿರೆ: ಇಲ್ಲಿನ ಬಸ್‌ಸ್ಟ್ಯಾಂಡ್ ಹತ್ತಿರದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ.

ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ ಅವರ ಪುತ್ರ ಬಲರಾಮ ಆಚಾರ್ಯ ಮುನ್ನಡೆಯುತ್ತಿದ್ದಾರೆ. ಪ್ರಸ್ತುತ ಐದು ಸಂಸ್ಥೆಗಳಾಗಿ ಬೆಳೆಯುತ್ತಿದ್ದು, ಮೂಡುಬಿದಿರೆಯಲ್ಲಿ ಎರಡು ವರ್ಷದ ಹಿಂದೆ ಪ್ರಾರಂಭಿಸಿ, ಈಗ ಅದನ್ನು ಸ್ಥಳಾಂತರಗೊಳಿಸಿ, ಇಂದಿನ ವ್ಯವಸ್ಥೆಗೆ ಅನುಗುಣವಾಗಿ ಅಪ್‌ಗ್ರೇಡ್ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ಶುಭ ಹಾರೈಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಶ್ರೀ ಧನಲಕ್ಷ್ಮಿ ಕ್ಯಾಶ್ ಎಕ್ಸ್‌ಪೋರ್ಟ್ಸ್ನ ಶ್ರೀಪತಿ ಭಟ್, ಚೌಟರ ಅರಮನೆಯ ಕುಲದೀಪ ಎಂ., ನವಮಿ ಗ್ರೂಪ್‌ನ ಆಡಳಿತ ನಿರ್ದೆಶಕ ನಂದಕುಮಾರ್ ಕುಡ್ವ, ನಿಶ್ಚಿತಾ ಗ್ರೂಪ್‌ನ ಪ್ರವರ್ತಕ ನಾರಾಯಣ ಪಿ.ಎಂ. ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥೆಗೆ ಶುಭ ಹಾರೈಸಿದರು.























































 
 

ಸಂಸ್ಥೆಯ ಚೇರ್‌ಮೆನ್ ಜಿ.ಎಲ್. ಬಲರಾಮ ಆಚಾರ್ಯ ಪ್ರಾಸ್ತಾವಿಸಿ, ಜಿ.ಎಲ್.ಆಚಾರ್ಯ ಜುವೆಲರ್ಸ್ ತನ್ನ ಹೊಸ ಶೋರೂಮ್‌ನ್ನು ಮೂಡುಬಿದಿರೆಯಲ್ಲಿ ಆರಂಭಿಸಿದೆ. ಹೊಸ ತಲೆಮಾರಿನ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿಶಾಲವಾದ ಮತ್ತು ಆಕರ್ಷಕವಾದ ಜುವೆಲ್ಲರಿ ಶೋರೂಮ್‌ನ್ನು ನಿರ್ಮಿಸಲಾಗಿದೆ. ಅತ್ಯಾಧುನಿಕ ವಿನ್ಯಾಸದ ಚಿನ್ನಾಭರಣಗಳು, ನವೀನ ಶೈಲಿಯ ಮತ್ತು ಇಲ್ಲಿ ಹೊಸ ಮಾದರಿಯ ಆಭರಣಗಳನ್ನು ಗ್ರಾಹಕರಿಗೆ ಒದಗಿಸಲು ಜಿ.ಎಲ್. ಆಚಾರ್ಯ ಜುವೆಲರ್ಸ್ ಸಜ್ಜಾಗಿದೆ. ಕರಾವಳಿ ಭಾಗದ ಗ್ರಾಹಕರಿಗೆ ಮತ್ತು ಆಭರಣ ಪ್ರಿಯರಿಗೆ ನಮ್ಮ ಸಂಸ್ಥೆಯು ಉತ್ತಮ ಗುಣಮಟ್ಟದ ಆಭರಣಗಳ ಮುಖೇನ ಸೇವೆ ನೀಡುತ್ತಾ ಬಂದಿದೆ. ಮೂಡುಬಿದಿರೆಯ ಗ್ರಾಹಕರಿಗೆ ಸುಸಜ್ಜಿತವಾದ ಈ ಹೊಸ ಶೋರೂಮ್ ಉತ್ತಮ ಅನುಭವವನ್ನು ನೀಡುತ್ತದೆ ಎಂದು ತಿಳಿಸಿದರು.

ನಿರ್ದೆಶಕ ಲಕ್ಷ್ಮೀಕಾಂತ ಬಿ.ಆಚಾರ್ಯ, ರಾಜೀವ್ ಬಲರಾಮ್ ಆಚಾರ್ಯ. ಸುಧನ್ವ ಆಚಾರ್ಯ, ಕುಟುಂಬಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು.

ದೀಕ್ಷಾ ಬಂಗೇರ ನಿರೂಪಿಸಿದರು.

error: Content is protected !!
Scroll to Top