ಕಡಬ: ಪೆಟ್ರೋಲು ಸುರಿದು ಹತ್ಯೆಗೆ ಯತ್ನ

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ಗಂಡನ ಸಹೋದರ ಕುಸುಮಾಧರ(37) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ ತಾನು ಬೊಬ್ಬೆ ಹಾಕಿದಾಗ ಪೆಟ್ರೋಲ್ ಕ್ಯಾನ್ ಮತ್ತು ಬೆಂಕಿಪೊಟ್ಟಣವನ್ನು ಎಸೆದು ಪರಾರಿಯಾಗಿರುವುದಾಗಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top